ದಿನಾಂಕ:12.8.2023 ಸಹಾಯಕ ಆಯುಕ್ತರು ಯಾದಗಿರಿ ಹಾಗೂ ತಹಸೀಲ್ದಾರರು ಶಹಾಪುರರವರು ಶಹಾಪುರ ತಾಲೂಕಿನ ಕನ್ಯಾಕೊಳ್ಳುರ, ಹಾಗೂ ವಿಭೂತಿಹಳ್ಳಿ ಗ್ರಾಮಗಳಿಗೆ ಮತಗಗಟ್ಟೆಗಳಿಗೆ ಭೇಟಿ ನೀಡಿ amf ಹಾಗೂ ಮನೆ ಮನೆ ಸರ್ವೇ ಕಾರ್ಯ ಪರಿಶೀಲನೆ ಮಾಡಿದರು.
ದಿನಾಂಕ:12.8.2023 ಅಪರ ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರರು ವಡರೇರಾರವರು ಬೆಂಡೆ ಬಂಬಳಿ ಗ್ರಾಮದ ಮತ ಗಟ್ಟೆ ಸಂಖ್ಯೆ 212,213,214,215 ಕೆ ಭೇಟಿ amf ಹಾಗೂ ಮನೆ ಮನೆ ಸರ್ವೇ ಕಾರ್ಯ ಪರಿಶೀಲನೆ ಮಾಡಿದರು.
ಜಿಲ್ಲೆಯ ಎಲ್ಲಾ ತಹಸೀಲ್ದಾರರು, ಉಪ ತಹಸೀಲ್ದಾರರು, ಕಂದಾಯ ನೀರಿಕ್ಷಕರು ಹಾಗೂ ಮತಗಟ್ಟೆ ಅಧಿಕಾರಿಗಳು ತಮ್ಮ ವಿಧಾನ ಸಭಾ ಕ್ಷೇತ್ರದಲ್ಲಿ ಮನೆ-ಮನೆಗೆ ಭೇಟಿ ನೀಡಿ ಮತದಾರರ ವಿಷೇಶ ಪ್ರರಿಷ್ಕರಣೆ ಕಾರ್ಯಾವನ್ನು ಮಾಡುತ್ತಿರುವುದು
ಜಿಲ್ಲೆಯ ಎಲ್ಲಾ ತಹಸೀಲ್ದಾರರು, ಉಪ ತಹಸೀಲ್ದಾರರು, ಕಂದಾಯ ನೀರಿಕ್ಷಕರು ಹಾಗೂ ಮತಗಟ್ಟೆ ಅಧಿಕಾರಿಗಳು ತಮ್ಮ ವಿಧಾನ ಸಭಾ ಕ್ಷೇತ್ರದಲ್ಲಿ ಮನೆ-ಮನೆಗೆ ಭೇಟಿ ನೀಡಿ ಮತದಾರರ ವಿಷೇಶ ಪ್ರರಿಷ್ಕರಣೆ ಕಾರ್ಯಾವನ್ನು ಮಾಡುತ್ತಿರುವುದು.
ಮಾನ್ಯ ಜಿಲ್ಲಾಧಿಕಾರಿಗಳು ಯಾದಗಿರಿ ರವರು ಯಾದಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಿಗೆ ಮನೆ ಮನೆ ಸಮೀಕ್ಷೆ ಹಾಗೂ ಮತಗಟ್ಟೆಗಳಿಗೆ ಮೂಲ ಸೌಕರ್ಯದ ಕುರಿತು ಪರಿಶೀಲಿಸಿದರು.
ದಿನಾಂಕ 09.08.2023 ರಂದು ಕೊಡೆಕಲ್ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ಸಂಗಪ್ಪ ಅವರಿಗೆ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆ ಮಾಡಲಾಯಿತು.
ದಿನಾಂಕ 24.07.2023 ಮಾನ್ಯ ಜಿಲ್ಲಾಧಿಕಾರಿಗಳು ಯಾದಗಿರಿ ರವರು ಮದ್ದರಕಿ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದ ಹಾನಿಯಾದ ಮನೆಗಳನ್ನು ಪರಿಶೀಲಿಸಿದರು.
ದಿನಾಂಕ : 24.07.2023 ರಂದು ಮಾನ್ಯ ಜಿಲ್ಲಾಧಿಕಾರಿಗಳು ಯಾದಗಿರಿ ರವರು ತಹಸೀಲ್ ಕಚೇರಿ ಶಹಾಪೂರ ಕ್ಕೆ ಭೇಟಿ ನೀಡಿ ಕಂದಾಯ ಇಲಾಖೆಯ ಕಾರ್ಯವೈಖರಿಗಳ ಬಗ್ಗೆ ಪರಿಶೀಲಿಸಿ, ಬಾಕಿ ಇರುವ ಕಡತಗಳನ್ನು ತ್ವರಿತ ವಿಲೇವಾರಿ ಮಾಡುವಂತೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ವಿಶೇಷವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೂಕ್ತ ಪ್ರೋತ್ಸಾಹ, ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಗುರುಮಿಠಕಲ್ ತಾಲೂಕಿನ ಎಲ್ಹೇರಿ ಪ್ರೌಢಶಾಲೆ ಮತ್ತು ಯಾದಗಿರಿ ತಾಲೂಕಿನ ಆದರ್ಶ ಮಹಾವಿದ್ಯಾಲಯ ಶಾಲೆಯ ವಿದ್ಯಾರ್ಥಿಗಳೊಂದಿಗೆ ಹೆಜ್ಜೆಗೊಂದು ದಾರಿ, ವಿದ್ಯಾರ್ಥಿಗಳೊಂದಿಗೆ ಸ್ಪೂರ್ತಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ದಿನಾಂಕ 23.06.2023 ರಂದು ಜಿಲ್ಲೆಯಲ್ಲಿ ಮುಂಗಾರು ಮಳೆ ವಿಳಂಬ ಕಾರಣದಿಂದ ಗ್ರಾಮೀಣ ಮತ್ತು ನಗರದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ, ಕಾಲಕಾಲಕ್ಕೆ ನೀರಿನ ಟ್ಯಾಂಕರ್ಗಳನ್ನು ಸ್ವಚ್ಛಗೊಳಿಸಿ, ಕುಡಿಯುವ ನೀರಿನ ಸಮಸ್ಯೆಗೆ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿಲಾಯಿತು.