ಡಿಜಿಟಲ್ ಭಾರತ ಕಾರ್ಯಕ್ರಮದ ಅಂಗವಾಗಿ ಭಾರತ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಡೆಲ್ ಟೆಕ್ನಾಲಜೀಸ್, ಲರ್ನಿಂಗ್ ಫೌಂಡೇಶನ್ ಅಡಿಯಲ್ಲಿ ಹಾಗೂ ಡಿಜಿಟಲ್ ಇಂಡಿಯಾ ಕಾರ್ಯಕ್ರಮವಾದ ಸಾಮಾನ್ಯ ಸೇವಾ ಕೇಂದ್ರಗಳ ಯೋಜನೆಯ ಸಹಯೋಗದೊಂದಿಗೆ ಡಿಜಿಟಲ್ ಸೇವೆ ತಲುಪಿಸುವ ವಾಹನಕ್ಕೆ ಚಾಲನೆ ನೀಡಲಾಯಿತು .
ದಿನಾಂಕ 27.1.2022 ರಂದು ಶಹಾಪುರ ತಾಲೂಕಿನ ಹೋತಪಟ ಜವಾಹರ ನವೋದಯ ವಿದ್ಯಾಲಯದಲ್ಲಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಸ್ಥಳಕ್ಕೆ ಬೇಟಿ ನೀಡಿ ಸೋಂಕಿತ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಬೇಕಾದ ಔಷಧಿ ವ್ಯವಸ್ಥೆ ಮಾಡಿ ಚಿಕಿತ್ಸೆ ನೀಡಿ ಅಲ್ಲದೇ ಸೋಂಕು ಉಲ್ಬಣಗೊಳ್ಳದಂತೆ ಕ್ರಮ ವಹಿಸಲು ಸೂಚಿಸಲಾಯಿತು. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗೆ ಒಂದು ವಾರ ರಜೆ ಘೋಷಿಸಿಲಾಯಿತು
73 ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಜಿಲ್ಲಾಡಳಿತದ ವತಿಯಿಂದ, 12 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.
ದಿನಾಂಕ 22.01.2022 ರಂದು ಗೌರವಾನ್ವಿತ ಪ್ರಧಾನ ಮಂತ್ರಿಗಳು, ಮಹತ್ವಾಕಾಂಕ್ಷೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಲಾಯಿತು. ಗೌರವಾನ್ವಿತ ಪ್ರಧಾನ ಮಂತ್ರಿಯವರು ಯಾದಗಿರಿ ಜಿಲ್ಲೆಯು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಮತ್ತು ಈ ಯೋಜನೆಯ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದರು.
ದಿನಾಂಕ 19.01.2022 ರಂದು ಯಾದಗಿರಿ ನಗರದಲ್ಲಿ ಪ್ರದಕ್ಷಿಣೆ ನಡೆಸಿ ಸಾರ್ವಜನಿಕರು ಕೋವಿಡ-19 ಸುರಕ್ಷತಾ ನಿಯಮ ಪಾಲಿಸುತ್ತಿರುವ ಕುರಿತು ಪರಿಶೀಲಿಸಿ ಮಾಸ್ಕ ಧರಿಸದವರಿಗೆ ಮಾಸ್ಕನ್ನು ವಿತರಿಸಿ, ಸಾಮಾಜಿಕ ಅಂತರವನ್ನು ಪಾಲಿಸಲು ತಿಳಿಸಿ ಕೋವಿಡ-19 ಕುರಿತು ಜಾಗೃತಿ ಮೂಡಿಸಲಾಯಿತು.
ದಿನಾಂಕ 16.01.2022 ರಂದು ವಾರಾಂತ್ಯದ ನಿರ್ಬಂಧ(ಕರ್ಪ್ಯೂ) ಪ್ರಯುಕ್ತ ಯಾದಗಿರಿ ನಗರದಲ್ಲಿ ಪ್ರದಕ್ಷಿಣೆ ನಡೆಸಿ ಸಾರ್ವಜನಿಕರು ಕೋವಿಡ-19 ಸುರಕ್ಷತಾ ನಿಯಮ ಪಾಲಿಸುತ್ತಿರುವ ಕುರಿತು ಪರಿಶೀಲಿಸಿ ಮಾಸ್ಕ ಧರಿಸದವರಿಗೆ ದಂಡ ಹಾಕಿಸಿ ಮಾಸ್ಕನ್ನು ವಿತರಿಸಿ ಕೋವಿಡ-19 ಕುರಿತು ಜಾಗೃತಿ ಮೂಡಿಸಲಾಯಿತು.
ದಿನಾಂಕ 12.01.2022 ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನಾಚರಣೆ ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಯಾದಗಿರಿ ತಾಲೂಕಿನ ಸರಕಾರಿ ಮಹಾವಿದ್ಯಾಲಯದಲ್ಲಿ ಯುವ ಸಪ್ತಾಹ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.
ದಿನಾಂಕ 11.1.2022 ರಂದು ಸುರಪುರ ತಾಲೂಕ ಆಸ್ಪತ್ರೆಗೆ ಬೇಟಿ ನೀಡಿ ಕೋವಿಡ್ ಮೂರನೇ ಅಲೆ ತಡೆಗಟ್ಟುವ ಬಗ್ಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಯಿತು.
ದಿನಾಂಕ 09.01.2022 ರಂದು ವಾರಾಂತ್ಯದ ನಿರ್ಬಂಧ(ಕರ್ಪ್ಯೂ) ಪ್ರಯುಕ್ತ ಶಹಾಪುರ ನಗರದಲ್ಲಿ ಪ್ರದಕ್ಷಿಣೆ ನಡೆಸಿ ಸಾರ್ವಜನಿಕರು ಕೋವಿಡ-೧೯ ಸುರಕ್ಷತಾ ನಿಯಮ ಪಾಲಿಸುತ್ತಿರುವ ಕುರಿತು ಪರಿಶೀಲಿಸಿ ಮಾಸ್ಕ ಧರಿಸದವರಿಗೆ ದಂಡ ಹಾಕಿಸಿ ಮಾಸ್ಕನ್ನು ವಿತರಿಸಿ ಕೋವಿಡ-೧೯ ಕುರಿತು ಜಾಗೃತಿ ಮೂಡಿಸಲಾಯಿತು.