ದಿನಾಂಕ 09.01.2020 ರಂದು ಶಹಾಪೂರ ತಾಲೂಕಿನ ಬೇವಿನಹಳ್ಳಿ(ಜೆ) ಮೂರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಯ ವಿದ್ಯಾರ್ಥಿಯು ದಿನಾಂಕ 08.01.2022 ಕಾಲುವೆಯಲ್ಲಿ ಕೊಚ್ಚಿಹೊದ ಕುರಿತು ಸ್ಥಾನಿಕ ಪರಿಶಿಲನೆಮಾಡಿ ಸದರಿ ವಿದ್ಯಾರ್ಥಿಯ ಪೋಷಕರಿಗೆ ಸಾಂತ್ವನ ಹೇಳಲಾಯಿತು.
ದಿನಾಂಕ 03/01/2022 ಜಿಲ್ಲೆಯಲ್ಲಿ 15 ವರ್ಷದಿಂದ 18 ವರ್ಷದ ವಯೋಮಾನದ ಪ್ರೌಢ ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗೆ ಲಸಿಕಾಕರಣ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮಹತ್ವಾಕಾಂಕ್ಷಿ ಜಿಲ್ಲೆ ಪ್ರಗತಿ ಪರಿಶೀಲನಾ ಸಭೆ
ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ, ಜಿಲ್ಲಾಡಳಿತ ಕೌಶಾಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತ್, ಯಾದಗಿರಿ ಇನ್ನಿತರ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉದ್ಯೋಗಮೇಳದ ಉದ್ಘಾಟಸಿ ಜಿಲ್ಲೆಯಲ್ಲಿ ಮಾನವ ಸಂಪನ್ಮೂಲ ಹೆಚ್ಚಾಗಿದ್ದು, ಇದನ್ನು ಬಳಸಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಲಾಯಿತು.
ದಿನಾಂಕ 20.12.2021 ರಂದು ಜಿಲ್ಲಾ ಆಸ್ಪತ್ರೆಗೆ ಭೇಟಿ ಮೂರನೇ ಕೋವಿಡ್ ಅಲೆ ತಡೆಗಟ್ಟುವ ಬಗ್ಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿ ರೂಪಾಂತರಿ ವೈರಸ್ ತಡೆಗೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿರುವ ಎಲ್ಲಾ ಶುಶ್ರೂಷ ಸಿಬ್ಬಂದಿ, ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಯಿತು.
ದಿನಾಂಕ 17.10.2021 ರಂದು ಯಾದಗಿರಿ ತಾಲೂಕಿನ ಯರಗೋಳ ಚೆಕ್ ಪೋಸ್ಟ್ಗ ಗೆ ಭೇಟಿ ನೀಡಿದ ಬಗ್ಗೆ
ದಿನಾಂಕ 16.12.2021 ರಂದು ಯಾದಗಿರಿ ತಾಲೂಕಿನ ಮೈಲಾಪುರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ
ದಿನಾಂಕ 13.12.2021 ರಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಲಾಯಿತು.
ಕರ್ನಾಟಕ ವಿಧಾನ ಪರಿಷತ್ತಿನ (ಸ್ಥಳೀಯ ಸಂಸ್ಥೆಗಳು) ಚುನಾವಣೆ-2021ರಪ್ರಯುಕ್ತ ಯಾದಗಿರಿ ನಗರ ಸಭೆ ಕಾರ್ಯಾಲಯ, ತಾಲೂಕಿನ ಮುಂಡರಗಿ, ರಾಮಸಮುದ್ರ, ಬಳಿಚಕ್ರ ಮತಗಟ್ಟೆಗಳಿಗೆ ಬೇಟಿ ಮತದಾನ ಪ್ರಕ್ರಿಯೆ ಪರಿಶೀಲಿಸಲಾಯಿತು
ಕರ್ನಾಟಕ ವಿಧಾನ ಪರಿಷತ್ತಿನ (ಸ್ಥಳೀಯ ಸಂಸ್ಥೆಗಳು) ಚುನಾವಣೆ-2021ರಪ್ರಯುಕ್ತ ಯಾದಗಿರಿ ತಾಲೂಕು ಕಚೇರಿ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಚುನಾವಣಾ ಆಯೋಗ ಸೂಚಿಸಿರುವ ಎಲ್ಲಾ ಮಾರ್ಗಸೂಚಿಗಳ ಅನ್ವಯ ಮತದಾನವು ಸಂಪೂರ್ಣ ಪಾರದರ್ಶಕ, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯುವಂತೆ ನೋಡಿಕೊಳ್ಳಲು ಸೂಚನೆ ನೀಡಲಾಯಿತು.