ದಿನಾಂಕ 05.12.2021 ರಂದು ಜಿಲ್ಲಾಧಿಕಾರಿಗಳು ಯಾದಗಿರಿ ತಾಲೂಕಿನ ಅರಿಕೇರಾ ಬಿ ತಾಂಡ, ಚಾಮನಾಳ, ಯಾದಗಿರಿ ನಗರದ ಮುಸ್ಲಿಂಪೂರ ಮತ್ತು ಅಂಬೇಡ್ಕರ್ ನಗರದ ಬೂತ್ ಗಳಿಗೆ ಭೇಟಿ ನೀಡಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ 2022 ರ ಸಂಬಂಧವಾಗಿ ಚುನಾವಣೆಗೆ ಸಂಬಂಧಿಸಿದಂತೆ ನಮೂನೆ-6, 6ಎ, 7, 8 ಮತ್ತು 8ಎ ಸಲ್ಲಿಕೆಯಾದ ಅರ್ಜಿಗಳ ಕುರಿತು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಯಾದಗಿರಿ ತಹಶೀಲ್ದಾರ ಚನ್ನಮಲ್ಲಪ್ಪ ಘಂಟಿ ಇನ್ನಿತರರು ಉಪಸ್ಥಿತರಿದ್ದರು.
ದಿನಾಂಕ 03.12.2021 ರಂದು ಕೃಷಿ ಮಹಾವಿದ್ಯಾಲಯ ಆಡಿಟೋರಿಯಂ ಸಭಾಂಗಣ ಭೀ- ಗುಡಿಯಲ್ಲಿ ಶಹಾಪುರ ಮತ್ತು ವಡಿಗೇರಾ ತಾಲೂಕಿನ ಲಸಿಕಾಕರಣ ಪ್ರಗತಿ ಪರಿಶೀಲನಾ ಸಭೆಯುನ್ನು ನಡೆಸಿದರು ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು
ದಿನಾಂಕ 30.11.21 ರಂದು ಜಿಲ್ಲಾಧಿಕಾರಿಗಳು ಸುರಪುರ ತಾಲೂಕಿನ ಶಾಖಾಪುರ ( ಎಸ್.ಎಚ್), ಹಲಗೇರಾ, ಕರ್ನಾಳ, ಚಂದಲಾಪುರೆ ಗ್ರಾಮಗಳಲ್ಲಿ ಕೋವಿಡ್ ಲಸಿಕೆ ನಿರಾಕರಿಸಿದ ಗ್ರಾಮಸ್ಥರ ಮನೆಗೆ ತೆರಳಿ ಲಸಿಕೆಯ ಮಹತ್ವತೆ ತಿಳಿಸಿ ಜನರ ಮನವಲಿಸೀ ಲಸಿಕೆ ಹಾಕಿಸಲಾಯಿತು.
ದಿನಾಂಕ 26.11.2021 ರಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ “ಸಂವಿಧಾನ ದಿನ” ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ದಿನಾಂಕ 25.11.2021 ರಂದು ಜಿಲ್ಲಾಧಿಕಾರಿಗಳು ವಡಗೇರಾ ತಾಲೂಕಿನ ನಾಯ್ಕ ಲ್ ಹಾಗೂ ಯಾದಗಿರಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿನ ಭತ್ತ ಖರೀದಿ ನೋಂದಣಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು
ದಿನಾಂಕ 23.11.2021 ರಂದು ಜಿಲ್ಲಾಧಿಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆ -2022 ರ ಸಂಬಂಧ ವಿಶೇಷ ನೋಂದಣೀ ಕಾರ್ಯಕ್ರಮದ ಅಂಗವಾಗಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.
ದಿನಾಂಕ 23.10.2021ರಂದು ನಾರಾಯಣ ಹೆಲ್ತ್ ಸಹಯೋಗದೊಂದಿಗೆ ಲಸಿಕಾಕರಣಕ್ಕಾಗಿ ನೂತನ ವೋಲ್ವೋ ಬಸ್ ಗೆ ಚಾಲನೆ ನೀಡಿದರು
ದಿನಾಂಕ 20.11.2021 ರಂದು ಜಿಲ್ಲಾಧಿಕಾರಿಗಳು ಯಾದಗಿರಿ ನಗರದ ವಿವಿಧ ವಾರ್ಡಗಳಿಗೆಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿದರು, ಮಾತಾಮಾಣಿಕೇಶ್ವರಿ ನಗರದಲ್ಲಿನ ಶುದ್ದ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ನೀರಿನ ಪಿಎಚ್ ಮತ್ತು ಕ್ಲೋರಿನ್ ಹಾಗೂ ಟರ್ಬುಡಿಟಿ ಟೆಸ್ಟ್ ಮಾಡಿಸಿ ಪರಿಶೀಲಿಸಿದರು
ಕರ್ನಾಟಕ ವಿಧಾನ ಪರಿಷತ್ತಿನ (ಸ್ಥಳೀಯ ಸಂಸ್ಥೆಗಳು) ಚುನಾವಣೆ-2021ರ ಸಂಬಂಧ ಯಾದಗಿರಿ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿಗಳು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು.
ದಿನಾಂಕ 12.11.21 ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ(ಸ್ಥಳೀಯ ಸಂಸ್ಥೆಗಳ) ಚುನಾವಣೆಯ ಪೂರ್ವ ಸಿದ್ದತಾ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ಮತ್ತು ಪರಿಣಾಮಕಾರಿಯಾಗಿ ಹಾಗೂ ಸುಮಗವಾಗಿ ಜರುಗಿಸಿಕೊಂಡು ಹೋಗುವಲ್ಲಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಪೊಲೀಸ್ ಇಲಾಖೆಯ ಅಧಿಕಾರಿ, ತೆರಿಗೆ ಇಲಾಖೆಯ ಅಧಿಕಾರಿ, ವಾಣಿಜ್ಯ ಇಲಾಖೆಯ ಅಧಿಕಾರಿ, ಅಬಕಾರಿ ಇಲಾಖೆಯ ಅಧಿಕಾರಿಗಳ ಸಭೆಯನ್ನು ಜರುಗಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಚುನಾವಣೆ ತಹಶೀಲ್ದಾರ ಸಂತೋಷ ರಾಣಿ ಎಮ್, ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.