ಸಂಬಂಧಿಸಿದ ARO ಗಳು 39- ಗುರ್ಮಿಟ್ಕಲ್ ವಿಧಾನಸಭಾ ಕ್ಷೇತ್ರದ 06- ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಅಂತರರಾಜ್ಯ ಗಡಿ ಚೆಕ್ ಪೋಸ್ಟ್ಗೆ ಭೇಟಿ ನೀಡಿದರು. ಭೇಟಿ ವೇಳೆ ಚೆಕ್ ಪೋಸ್ಟ್ ಚಟುವಟಿಕೆಗಳ ಕೂಲಂಕುಷ ಪರಿಶೀಲನೆ ನಡೆಸಿದರು.
05-ರಾಯಚೂರು ಸಂಸದೀಯ ಕ್ಷೇತ್ರದ ವ್ಯಾಪ್ತಿಯ 37-ಶಹಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮುದಾಬುಲ್ ಚೆಕ್ ಪೋಸ್ಟ್ ಅನ್ನು ಗೌರವಾನ್ವಿತ ಜಿಲ್ಲಾಧಿಕಾರಿ ಮೇಡಂ ಅವರು ಪರಿಶೀಲಿಸಿದರು. ಹಾಗು ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತಾ ಮತ್ತು ಶಹಾಪುರದ ಸಹಾಯಕ ಚುನಾವಣಾಧಿಕಾರಿ ಅವರೊಂದಿಗೆ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು ಪರಿಶೀಲಿಸಿದರು.
ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಕುರಿತು ಜಿಲ್ಲಾಧಿಕಾರಿಗಳಾದ ಡಾ.ಸುಶೀಲ. ಬಿ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು . ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಓ ಗರಿಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತಾ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಚುನಾವಣೆ ತಹಶಿಲ್ದಾರ ಸಂತೋಷರಾಣಿ ಉಪಸ್ಥಿತರಿದ್ದರು
ಗೌರವಾನ್ವಿತ ಡಿಸಿ ಮೇಡಂ ಅವರು ಶಹಾಪುರದ ಪದವಿ ಕಾಲೇಜಿನಲ್ಲಿ ಸ್ವೀಪ್ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ -2024 ರ ಸಂಬಂಧ ದಿನಾಂಕ: 22.12.23 ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿ Forms Super Checking ಕಾರ್ಯ ನಡೆಸಲಾಯಿತು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ -2024 ರ ಸಂಬಂಧ ದಿನಾಂಕ: 22.12.23 ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಭಾಗ ಸಂಖ್ಯೆ 149 Forms Super Checking ಕಾರ್ಯ ನಡೆಸಲಾಯಿತು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ -2024 ರ ಸಂಬಂಧ ದಿನಾಂಕ: 16.12.23 ರಂದು ಯಾದಗಿರಿ ನಗರದ ಭಾಗ ಸಂಖ್ಯೆ 51, 52, 53 & 54 ರ ಮತಗಟ್ಟೆಗಳಿಗೆ ಭೇಟಿ ನೀಡಿ Form- 6,7,8 ಗಳ ಪರಿಶೀಲನೆ ಮತ್ತು DSE, PSE ಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.
ದಿನಾಂಕ:13.12.23 ರಂದು ಗುರುಮಿಠಕಲ್ ತಾಲೂಕಿನ ಅನಪುರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿನ ಮೂಲ ಸೌಕರ್ಯ ಮತ್ತು ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಪರಿಶೀಲಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಗುಣಮಟ್ಟದ ಆಹಾರ ಪದಾರ್ಥಗಳು ಮೂಲ ಸೌಕರ್ಯ ಕೊರತೆ ಆಗದಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ದಿನಾಂಕ:13.12.23 ರಂದು ಗುರುಮಿಠಕಲ್ ತಾಲೂಕಿನ ಕಂದಕೂರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿನ ಮೂಲ ಸೌಕರ್ಯ ಮತ್ತು ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಪರಿಶೀಲಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಗುಣಮಟ್ಟದ ಆಹಾರ ಪದಾರ್ಥಗಳು ಮೂಲ ಸೌಕರ್ಯ ಕೊರತೆ ಆಗದಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು
ದಿನಾಂಕ: 13.12.23 ರಂದು ಗುರಮಿಠಕಲ್ ತಾಲೂಕಿನ ದಂತಾಪೂರ ಅನಿರೀಕ್ಷಿತವಾಗಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನದ ಬಗ್ಗೆ ಕಾಳಜಿ ವಹಿಸಬೇಕು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ದಾಖಲೆಗಳು ಸರಿಯಾಗಿ ನಿರ್ವಹಿಸ ಬೇಕೆಂದು ಸೂಚಿಸಲಾಯಿತು.