ಮುಕ್ತಾಯ ಮಾಡು

ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಯಾದಗಿರಿ ರವರ ಅಧ್ಯಕ್ಷತೆಯಲ್ಲಿ ದಿನಾಂಕ:18.03.2024 ರಂದು ರಾಜಕೀಯ ಪಕ್ಷಗಳೊಂದಿಗೆ ಜರುಗಿದ ಸಭೆ. ಎಲ್ಲಾ ರಾಜಕೀಯ ಪಕ್ಷಗಳು ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮತ್ತು ಶೋರಾಪೂರ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆ-2024 ನಿಷ್ಪಕ್ಷಪಾತವಾಗಿ ನಡೆದು ಯಶಸ್ವಿಯಾಗಲು ಸಹಕಾರ ನೀಡಬೇಕೆಂದು ಮಾನ್ಯ ಜಿಲ್ಲಾಧಿಕಾರಿಗಳು ತಿಳಿಸಿದರು. ಮಾನ್ಯ ಪೊಲೀಸ್ ಅಧೀಕ್ಷಕರು,ಯಾದಗಿರಿ, ಅಪರ ಜಿಲ್ಲಾಧಿಕಾರಿಗಳು, ಯಾದಗಿರಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.